• August 23, 2025
  • Last Update August 21, 2025 9:01 pm
  • Australia

ವರಶೆ ಪತ್ರಿಕೋದ್ಯಮ ಪ್ರಶಸ್ತಿಗೆ ರವಿ ಹೆಗಡೆ ಆಯ್ಕೆ

ವರಶೆ ಪತ್ರಿಕೋದ್ಯಮ ಪ್ರಶಸ್ತಿಗೆ ರವಿ ಹೆಗಡೆ ಆಯ್ಕೆ



ಬ್ರಹ್ಮಾವರ: ಇಲ್ಲಿನ ತಾಲೂಕು ಪತ್ರಕರ್ತರ ಸಂಘ ಆಶ್ರಯದಲ್ಲಿ ಕೊಡಮಾಡುವ 2024ನೇ
ಸಾಲಿನ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಕನ್ನಡಪ್ರಭ ದಿನಪತ್ರಿಕೆಯ ಪ್ರಧಾನ ಸಂಪಾದಕ, ಹಿರಿಯ ಪತ್ರಕರ್ತ ರವಿ ಹೆಗಡೆ ಆಯ್ಕೆಯಾಗಿದ್ದಾರೆ.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸಿದ ಗಣ್ಯರಿಗೆ ಬ್ರಹ್ಮಾವರ ಪತ್ರಕರ್ತರ ಸಂಘವು ವಡ್ಡರ್ಸೆಯವರ ಹೆಸರಿನಲ್ಲಿ ಈ ಪ್ರಶಸ್ತಿಯನ್ನು ನೀಡುತ್ತ ಬಂದಿದೆ.
ಜ.11ರಂದು ಸಂಜೆ 5ಗಂಟೆಗೆ ಬ್ರಹ್ಮಾವರ ಬಂಟರಭವನದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ
ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೆರವೇರಲಿದೆ ಎಂದು ಬ್ರಹ್ಮಾವರ ಪತ್ರಕರ್ತರ ಸಂಘ
ಪ್ರಕಟನೆಯಲ್ಲಿ ತಿಳಿಸಿದೆ.

administrator

Related Articles

Leave a Reply

Your email address will not be published. Required fields are marked *

error: Content is protected !!