• August 23, 2025
  • Last Update August 21, 2025 9:01 pm
  • Australia

9 & 11 ಅಧಿಕಾರ ಗ್ರಾ.ಪಂಗೆ ನೀಡಿ: ಸಿಎಂಗೆ ಕೋಟ ಪತ್ರ

ಉಡುಪಿ: ಈ ಹಿಂದೆ ಗ್ರಾಮಪಂಚಾಯತ್ ಕೈಯಲ್ಲಿದ್ದ ಏಕ ನಿವೇಶನ ನಕ್ಷೆಯ ಅನುಮೋದನೆ ಮತ್ತು ಇ ಸ್ವತ್ತಿನ 9&11 ವಿತರಣೆಯ ಅಧಿಕಾರವನ್ನು ಏಕಾಏಕಿ ಸ್ಥಳೀಯ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸಲಾಗಿದೆ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆಗಳಾಗುತ್ತಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತುಂಡು ಭೂಮಿ ಮಾಲೀಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಹೊಸ ಆದೇಶದಿಂದ ಸಾಕಷ್ಟು ಗೊಂದಲಗಳುಂಟಾಗಿ ಸಾರ್ವಜನಿಕರಿಗೆ ತೊಂದರೆ ಅನುಭವಿಸುತ್ತಿದ್ದಾರೆ.
ಈ ಹಿಂದೆ ವಿನ್ಯಾಸದ ಅನುಮೋದನೆಗೆ ಜಿಲ್ಲಾ ಪಂಚಾಯತ್ ಇಂಜಿನಿಯರ್ ವಿಭಾಗದಿಂದ ತಾಂತ್ರಿಕ ಶಿಫಾರಸ್ಸುಗಳಿಗೆ ಅವಕಾಶಗಳಿತ್ತು. ಈಗ ಸ್ಥಳೀಯ ನಗರಾಭಿವೃದ್ಧಿ ಪ್ರಾಧಿಕಾರದ ಅನುಮೋದನೆಗೆ ಕಾಯಬೇಕಾಗಿದೆ. ಸಿಬ್ಬಂದಿಗಳು ಮತ್ತು ಮೂಲ ಸೌಕರ್ಯ ಕೊರತೆ ಸಮಸ್ಯೆಯನ್ನು ಪ್ರಾಧಿಕಾರ ಎದುರಿಸುತ್ತಿದೆ. ಅದಲ್ಲದೆ ಈ ಹೊಸ ವ್ಯವಸ್ಥೆಯನ್ನು ಅಳವಡಿಸಿರುವುದರಿಂದ ಗ್ರಾಮಪಂಚಾಯತ್ಗೆ ಇದ್ದ ಹಕ್ಕನ್ನು ಕಸಿದುಕೊಂಡತಾಗಿದೆ ಎಂದು ಸ್ಥಳೀಯಾಡಳಿತದ ಪ್ರತಿನಿಧಿಗಳು ದೂರಿದ್ದಾರೆ. ಏಕ ನಿವೇಶನ ನಕ್ಷೆಯ ಅನುಮೋದನೆ ಮತ್ತು 9 & 11 ರ ವಿತರಣೆಯ ವ್ಯವಸ್ಥೆಯನ್ನು ಪಂಚಾಯತ್ ರಾಜ್ ವ್ಯವಸ್ಥೆಯಿಂದ ನಗರ ಪ್ರಾಧಿಕಾರಕ್ಕೆ ನೀಡಿರುವುದರಿಂದ ಬಡವರು ಸೇರಿದಂತೆ, ಜನಸಾಮಾನ್ಯರಿಗೆ ತೊಂದರೆಯಾಗಿದೆ.
ಆದ್ದರಿಂದ ಹಿಂದಿನಂತೆ ಗ್ರಾಮ ಪಂಚಾಯತ್ ಮತ್ತು ಪಂಚಾಯತ್ ರಾಜ್ ವ್ಯವಸ್ಥೆಯ ಮೂಲಕ 9 & 11 ರ ವಿತರಣೆ ಮತ್ತು ಏಕ ನಿವೇಶನ ನಕ್ಷೆಯ ಅನುಮೋದನೆ ನೀಡುವಂತೆ ಆದೇಶ ಮಾಡಬೇಕೆಂದು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.

administrator

Related Articles

Leave a Reply

Your email address will not be published. Required fields are marked *

error: Content is protected !!