• August 23, 2025
  • Last Update August 21, 2025 9:01 pm
  • Australia

ಬ್ರೇಕ್‌ಫೇಲ್ ಆದ ಬಸ್ಸನ್ನು ನಿಯಂತ್ರಣಕ್ಕೆ ತಂದು ಭಾರಿ ಅಪಾಯ ತಪ್ಪಿಸಿದ ಚಾಲಕ

ಬ್ರೇಕ್‌ಫೇಲ್ ಆದ ಬಸ್ಸನ್ನು ನಿಯಂತ್ರಣಕ್ಕೆ ತಂದು ಭಾರಿ ಅಪಾಯ ತಪ್ಪಿಸಿದ ಚಾಲಕ

ಮಂಗಳೂರು: ಬ್ರೇಕ್‌ಫೇಲ್ ಆದ ಬಸ್ಸನ್ನು ಕ್ಷಣಮಾತ್ರದಲ್ಲಿ ನಿಯಂತ್ರಣಕ್ಕೆ ತಂದ ಚಾಲಕರೊಬ್ಬರ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ ಘಟನೆ ನಗರದ ಬಳ್ಳಾಲ್‌ಬಾಗ್‌ನಲ್ಲಿ ನಡೆದಿದೆ.

ಉಡುಪಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ವಿಶಾಲ್ ಟ್ರಾವೆಲ್ಸ್ ಹೆಸರಿನ ಖಾಸಗಿ ಬಸ್, ಬೆಳಗ್ಗೆ 8ಗಂಟೆ ಸುಮಾರಿಗೆ ನಗರದ ಬಳ್ಳಾಲ್‌ಬಾಗ್‌‌ನಲ್ಲಿ ಸಂಚರಿಸುತ್ತಿತ್ತು. ಈ ವೇಳೆ ಏಕಾಏಕಿ ಬಸ್ ಬ್ರೇಕ್‌ಫೇಲ್‌ಗೊಳಗಾಗಿದೆ‌. ತಕ್ಷಣ ಎಚ್ಚೆತ್ತುಕೊಂಡ ಚಾಲಕ ಸಿದ್ದೀಕ್ ಎರ್ಮಾಳ್ ಸಮಯಪ್ರಜ್ಞೆ ಮೆರೆದು ಬಸ್‌ನ್ನು ಫುಟ್‌ಪಾತ್ ಮೇಲೇರಿಸಿ ಯಾವುದೇ ಅನಾಹುತವಾಗದಂತೆ ಪ್ರಯಾಣಿಕರನ್ನು ಪಾರು ಮಾಡಿದ್ದಾರೆ.

ಬೆಳಗ್ಗೆ ಹೊತ್ತಾಗಿದ್ದರಿಂದ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಆದರೆ ಬಸ್ ಚಾಲಕ ಸಿದ್ದೀಕ್ ಅವರ ಸಮಯಪ್ರಜ್ಞೆಯಿಂದ ಯಾವುದೇ ಅನಾಹುತ ಸಂಭವಿಸದೇ ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿ ಪಾರಾಗಿದ್ದಾರೆ. ಸಿದ್ದೀಕ್ ಅವರ ಸಮಯಪ್ರಜ್ಞೆಗೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಜಾಲತಾಣದಲ್ಲಿ ಚಾಲಕನ ಕುರಿತು ಪೋಸ್ಟ್ ಮಾಡಿ ಶ್ಲಾಘಿಸಿದ್ದಾರೆ.

administrator

Related Articles

Leave a Reply

Your email address will not be published. Required fields are marked *

error: Content is protected !!