ಕರಾವಳಿ ಭಾಗಕ್ಕೆ ವಂದೇ ಭಾರತ್ ವಿಸ್ತರಣೆ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಕೋಟ ಶ್ರೀನಿವಾಸ್ ಪೂಜಾರಿ ಮನವಿ

February 4, 2026 7:38 AM

ನವದೆಹಲಿ, ಫೆಬ್ರವರಿ 4:
ಕರ್ನಾಟಕದ ಕರಾವಳಿ ಭಾಗದ ರೈಲ್ವೆ ಸಂಪರ್ಕವನ್ನು ಬಲಪಡಿಸಲು ಮತ್ತು ಪ್ರಯಾಣಿಕರ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸಲು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದರು. ಈ ಸಂದರ್ಭ ಕರಾವಳಿಯ ರೈಲ್ವೇ ಜಾಲ ಅಭಿವೃದ್ಧಿಗೆ ಬೇಕಾಗಿರುವ ಪ್ರಮುಖ ವಿಚಾರಗಳ ಬಗ್ಗೆ ಸಚಿವರೊಂದಿಗೆ ಚರ್ಚಿಸಿದರು.


📍 ಮನವಿಯ ಪ್ರಮುಖ ಅಂಶಗಳು:

  • ವಂದೇ ಭಾರತ್ ವಿಸ್ತರಣೆ: ಬೆಂಗಳೂರಿನಿಂದ ಮಂಗಳೂರು, ಉಡುಪಿ ಮೂಲಕ ಉತ್ತರ ಕನ್ನಡ ಜಿಲ್ಲೆಯವರೆಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ವಿಸ್ತರಿಸುವಂತೆ ಒತ್ತಾಯಿಸಲಾಯಿತು.
  • ಪ್ರಯಾಣಿಕರ ಒತ್ತಡ: ಪ್ರತಿದಿನ ಕರಾವಳಿ ಜಿಲ್ಲೆಗಳಿಂದ ಬೆಂಗಳೂರಿಗೆ 600ಕ್ಕೂ ಹೆಚ್ಚು ಖಾಸಗಿ ಬಸ್‌ಗಳು ಸಂಚರಿಸುತ್ತಿವೆ. ರೈಲ್ವೆ ಸೌಲಭ್ಯ ವಿಸ್ತರಣೆಯಾದಲ್ಲಿ ಸಾವಿರಾರು ನಿತ್ಯ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ವಿವರಿಸಿದರು.
  • ಕೊಂಕಣ ರೈಲ್ವೆ ಹಳಿ ದ್ವಿಪಥ (Doubling): ಮಂಗಳೂರಿನಿಂದ ಮುಂಬೈವರೆಗಿನ 734 ಕಿ.ಮೀ. ಕೊಂಕಣ ರೈಲ್ವೆ ಹಳಿಯನ್ನು ದ್ವಿಪಥಗೊಳಿಸಲು ಕೂಡಲೇ ಸರ್ವೆ ನಡೆಸಿ ಹಣ ಬಿಡುಗಡೆ ಮಾಡಬೇಕೆಂದು ಸಚಿವರಿಗೆ ಕೋರಿದರು. ಹಳಿ ದ್ವಿಪಥವಾದಲ್ಲಿ ಹೆಚ್ಚುವರಿ ರೈಲುಗಳ ಸಂಚಾರಕ್ಕೆ ದಾರಿ ಸುಗಮವಾಗಲಿದೆ.
  • ಸೇವೆಯ ಸುಧಾರಣೆ: ಕಳೆದ ಹಲವು ವರ್ಷಗಳಿಂದ ಕರಾವಳಿ ಭಾಗದ ರೈಲ್ವೆ ಸೇವೆಗಳಲ್ಲಿ ಕಂಡುಬರುತ್ತಿದ್ದ ಕೊರತೆಗಳನ್ನು ನೀಗಿಸಲು ಮೋದಿ ಸರ್ಕಾರ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ಇದನ್ನು ಮತ್ತಷ್ಟು ವೇಗಗೊಳಿಸಲು ಹೊಸ ರೈಲುಗಳ ಅಗತ್ಯವಿದೆ ಎಂದು ಮನವಿ ಮಾಡಿದರು.

ಸಚಿವರ ಸ್ಪಂದನೆ:
ಕರಾವಳಿ ಕರ್ನಾಟಕದ ಈ ಪ್ರಮುಖ ಬೇಡಿಕೆಗಳನ್ನು ಆಲಿಸಿದ ಸಚಿವ ಅಶ್ವಿನಿ ವೈಷ್ಣವ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ತಾಂತ್ರಿಕ ವರದಿಗಳನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

Harish Kiran Thunga

Harish Kiran Thunga is a journalist and editor based in Karnataka, India. He is actively involved in Udupi District Working Journalist Associations in the Udupi district. He serves as the Editor in Chief at Newsrays.in, a regional news portal. He also manages the Newsrays live YouTube channel, which features local news and short stories.

Join WhatsApp

Join Now

Leave a Comment

You cannot copy content of this page