ಮಂಗಳೂರಿನಲ್ಲಿ ನಡೆದ 76ನೇ ಭಾರತೀಯ ದಂತ ವೈದ್ಯರ ಸಮಾವೇಶ: IDA ಉಡುಪಿ ಘಟಕಕ್ಕೆ 6 ರಾಷ್ಟ್ರೀಯ ಪ್ರಶಸ್ತಿಗಳು

February 10, 2026 6:47 PM

ಮಂಗಳೂರು, ಫೆ.10:
ಇಲ್ಲಿ ನಡೆದ 76ನೇ ಭಾರತೀಯ ದಂತ ವೈದ್ಯರ ಸಮಾವೇಶದಲ್ಲಿ ಇಂಡಿಯನ್ ಡೆಂಟಲ್ ಅಸೋಸಿಯೇಷನ್ (IDA) ಉಡುಪಿ ಘಟಕವು ರಾಷ್ಟ್ರಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದೆ. IDA ಉಡುಪಿ ಘಟಕದ ಮೊದಲ ಮಹಿಳಾ ಅಧ್ಯಕ್ಷೆ ಡಾ. ಯು.ಬಿ. ಶಬರಿ ಅವರ ನೇತೃತ್ವದ ತಂಡವು ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು, ಒಟ್ಟು ಆರು ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದುಕೊಂಡಿದೆ.

ಪ್ರಶಸ್ತಿಗಳನ್ನು ಡಾ. ಯು.ಬಿ. ಶಬರಿ, ಡಾ. ಅತುಲ್ ಯು.ಆರ್, ಡಾ. ಕೈಲ್ಕೆರೆ ಸುಜನ್ ಶೆಟ್ಟಿ, ಡಾ. ಶ್ರೀಧರ್ ಶೆಟ್ಟಿ ಹಾಗೂ ಡಾ. ಪ್ರತೀಕ್ಷಾ ಶೆಟ್ಟಿ ಅವರು ಸ್ವೀಕರಿಸಿದರು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಇಂಡಿಯನ್ ಡೆಂಟಲ್ ಅಸೋಸಿಯೇಷನ್‌ನ ರಾಷ್ಟ್ರೀಯ ಅಧ್ಯಕ್ಷರಾದ ಡಾ. ನಿಖಿಲ್ ಬಾರ್ವೆ, ರಾಷ್ಟ್ರೀಯ ಕಾರ್ಯದರ್ಶಿ ಡಾ. ಅಶೋಕ್ ಧೋಬ್ಲೆ, ಡಾ. ಅಜಿತ್ ಕದಮ್ ಹಾಗೂ ಡಾ. ಪ್ರಮೋದ್ ಶೆಟ್ಟಿ ಅವರು ಉಪಸ್ಥಿತರಿದ್ದು.

ಪ್ರಶಸ್ತಿ ವಿಜೇತರಿಗೆ ಗೌರವ ಪ್ರದಾನ ಮಾಡಿ ಮಾತನಾಡಿದ ಗಣ್ಯರು, IDA ಉಡುಪಿ ಘಟಕವು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ದಂತ ವೈದ್ಯಕೀಯ ಕ್ಷೇತ್ರಕ್ಕೆ ನೀಡುತ್ತಿರುವ ನಿರಂತರ ಸೇವೆ ಶ್ಲಾಘನೀಯವಾಗಿದ್ದು, ಡಾ. ಯು.ಬಿ. ಶಬರಿ ಅವರ ನಾಯಕತ್ವವು ಇತರ ಘಟಕಗಳಿಗೆ ಮಾದರಿಯಾಗಿದೆ ಎಂದು ಪ್ರಶಂಸಿಸಿದರು.

IDA ಉಡುಪಿ ಘಟಕದ ಈ ಸಾಧನೆ ಉಡುಪಿ ಜಿಲ್ಲೆಯ ದಂತ ವೈದ್ಯಕೀಯ ಕ್ಷೇತ್ರಕ್ಕೆ ಹೆಮ್ಮೆ ತಂದುಕೊಟ್ಟಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆ ಮಾಡುವ ವಿಶ್ವಾಸವನ್ನು ಮೂಡಿಸಿದೆ ಎಂದು ಹೇಳಿದರು.

Harish Kiran Thunga

Harish Kiran Thunga is a journalist and editor based in Karnataka, India. He is actively involved in Udupi District Working Journalist Associations in the Udupi district. He serves as the Editor in Chief at Newsrays.in, a regional news portal. He also manages the Newsrays live YouTube channel, which features local news and short stories.

Join WhatsApp

Join Now

Leave a Comment

You cannot copy content of this page