• November 23, 2025
  • Last Update November 14, 2025 3:04 pm
  • Australia

ಬಾಳೆಕುದ್ರು ಶ್ರೀ ನೃಸಿಂಹಾಶ್ರಮ ಸ್ವಾಮೀಜಿ ಅಸ್ವಸ್ಥ ಆಸ್ಪತ್ರೆಗೆ ದಾಖಲು

ಬಾಳೆಕುದ್ರು ಶ್ರೀ ನೃಸಿಂಹಾಶ್ರಮ ಸ್ವಾಮೀಜಿ ಅಸ್ವಸ್ಥ ಆಸ್ಪತ್ರೆಗೆ ದಾಖಲು

ಉಡುಪಿ: ಬಾಳೆಕುದ್ರು ಶ್ರೀ ನೃಸಿಂಹಾಶ್ರಮ ಇಂದು (ಜು.04) ಬೆಳಗ್ಗೆ ಅಸ್ವಸ್ಥರಾಗಿದ್ದು, ತಕ್ಷಣ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಅವರು ಹಲವು ಸಮಯಗಳಿಂದ ಅನಾರೋಗ್ಯದಿಂದ ಇದ್ದು, ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಡಯಾಲಿಸಿಸ್‌ಗೆಂದು ಶ್ರೀ ಮಠದಿಂದ ತೆರಳಿದ ಸಂದರ್ಭ ಬ್ರಹ್ಮಾವರ ಸಮೀಪ ಅಸ್ವಸ್ಥರಾದರು. ತಕ್ಷಣ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಮೂಲಗಳ ಪ್ರಕಾರ ಅವರು ಅವರು ಬ್ರಹ್ಮೈಕ್ಯರಾಗಿದ್ದಾರೆ ಎಂದು ಹೇಳಲಾಗುತ್ತಿದ್ದು, ವೈದ್ಯರ ಅಧಿಕೃತ ಘೋಷಣೆಯಾಗಿಲ್ಲ ಎಂದು ತಿಳಿದುಬಂದಿದೆ.

administrator

Related Articles

Leave a Reply

Your email address will not be published. Required fields are marked *

error: Content is protected !!