• August 23, 2025
  • Last Update August 21, 2025 9:01 pm
  • Australia

ಎಂಟರ ಬಾಲಕಿಯ ರೇಪ್ ಆ್ಯಂಡ್ ಮರ್ಡರ್: ಮೂವರು ಕಾಮುಕರಿಗೆ ಮರಣದಂಡನೆ

ಎಂಟರ ಬಾಲಕಿಯ ರೇಪ್ ಆ್ಯಂಡ್ ಮರ್ಡರ್: ಮೂವರು ಕಾಮುಕರಿಗೆ ಮರಣದಂಡನೆ

ಮಂಗಳೂರು: ನಗರದ ಗ್ರಾಮಾಂತರ ಠಾಣಾ ವ್ಯಾಪ್ತಿಯ ತಿರುವೈಲು ಪರಾರಿ ಗ್ರಾಮದಲ್ಲಿ 2021ರಲ್ಲಿ 8ವರ್ಷದ ಬಾಲಕಿಯನ್ನು ಅತ್ಯಾಚಾರ ನಡೆಸಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ-2 ಪೊಕ್ಸೊ ವಿಶೇಷ ನ್ಯಾಯಾಲಯ ಮರಣದಂಡನೆ ವಿಧಿಸಿ, 1,20,000 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

ಮಧ್ಯಪ್ರದೇಶ ಮೂಲದ ಜಯಸಿಂಗ್(21), ಮುಖೇಶ್ ಸಿಂಗ್(20), ಜಾರ್ಖಾಂಡ್ ಮೂಲದ ಮನೀಷ್ ತಿರ್ಕಿ(33) ಮರಣದಂಡನೆಗೆ ಒಳಗಾದ ಕಾಮುಕರು.

ಅಪರಾಧಿಗಳು ಮಂಗಳೂರಿನ ಹೊರವಲಯದ ತಿರುವೈಲು ಗ್ರಾಮದ ಪರಾರಿ ಎಂಬಲ್ಲಿನ ರಾಜ್‌ಟೈಲ್ಸ್ ಫ್ಯಾಕ್ಟರಿಯಲ್ಲಿ ಕಾರ್ಮಿಕರಾಗಿದ್ದರು‌. 2021ರ ನವೆಂಬರ್ 21ರಂದು ಫ್ಯಾಕ್ಟರಿಗೆ ರಜೆಯಿತ್ತು. ಕಾರ್ಮಿಕರು ಯಾರೂ ಇರಲಿಲ್ಲ. ಆದ್ದರಿಂದ ಇವರು ಅದೇ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ರಂತು ತಿರ್ಕಿ ಲೋಹರ ಹಾಗೂ ಸೀತಾ ದಂಪತಿಯ 8ವರ್ಷದ ಪುತ್ರಿಯನ್ನು ಚಿಕ್ಕಿ ಕೊಟ್ಟು ಪುಸಲಾಯಿಸಿದ್ದಾರೆ. ಬಳಿಕ ಸಿಸಿ ಕ್ಯಾಮರಾ ಇಲ್ಲದ ಕಡೆಗೆ ಕರೆದೊಯ್ದು, ಆಕೆಯ ಮೇಲೆ ಮೂವರೂ ಅತ್ಯಾಚಾರ ನಡೆಸಿದ್ದಾರೆ‌. ಬಾಲಕಿ ನೋವಿನಿಂದ ಚೀರಾಡಿದಾಗ ಜಯಸಿಂಗ್ ಒಂದು ಕೈಯಿಂದ ಬಾಲಕಿಯ ಬಾಯನ್ನು ಮುಚ್ಚಿ ಮತ್ತೊಂದು ಕೈಯಿಂದ ಕುತ್ತಿಗೆ ಹಿಚುಕಿದ್ದಾನೆ. ಪರಿಣಾಮ ಆಕೆ ಅಲ್ಲಿಯೇ ಮೃತಪಟ್ಟಿದ್ದಾಳೆ.

ಬಳಿಕ ಬಾಲಕಿಯ ಮೃತದೇಹವನ್ನು ಅಲ್ಲಿಯೇ ಇದ್ದ ಕಲ್ಲಚಪ್ಪಡಿ ಹಾಸಿರುವ ತೋಡಿನಲ್ಲಿ ಇಟ್ಟಿದ್ದಾರೆ. ಬಾಲಕಿ ಕಾಣದಿದ್ದಾಗ ಆಕೆಯ ಹೆತ್ತವರು ಹುಡುಕಾಡಿದ್ದಾರೆ. ಈ ವೇಳೆ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ಈ ವೇಳೆ ಕೃತ್ಯ ಎಸಗಿದ ಮೂವರು ಹಾಗೂ ಅವರಿಗೆ ಸಹಕರಿಸಿದ ನಾಲ್ಕನೇ ಆರೋಪಿ ಸ್ಥಳದಿಂದ ಪರಾರಿಯಾಗಿದ್ದರು. ಮೃತ ಬಾಲಕಿಯ ತಾಯಿ ನೀಡಿರುವ ದೂರಿನಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿ ಪೊಕ್ಸೊ ಹಾಗೂ ಕೊಲೆ ಪ್ರಕರಣದಲ್ಲಿ ಕೇಸು ದಾಖಲಿಸಿದ್ದರು.

ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣವನ್ನು ಕೈಗೆತ್ತಿಕೊಂಡ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ-2 ಪೊಕ್ಸೊ ವಿಶೇಷ ನ್ಯಾಯಾಲಯವು 30 ಸಾಕ್ಷಿಗಳನ್ನು ವಿಚಾರಣೆ ನಡೆಸಿ, 74ದಾಖಲೆಗಳನ್ನು ಹಾಗೂ ಸ್ಥಳದಲ್ಲಿ ಸಿಕ್ಕ 45 ಪರಿಕರಳನ್ನು ಗುರುತಿಸಿತ್ತು. ಪ್ರಕರಣದ ಸಾಕ್ಷ್ಯ, ದಾಖಲೆಗಳು, ಪೂರಕ ಸಾಕ್ಷ್ಯ, ವೈಜ್ಞಾನಿಕ ವರದಿ ಹಾಗೂ ವಾದವಿವಾದಗಳನ್ನು ಆಲಿಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್.ಟಿ.ಎಸ್.ಸಿ-2 ಪೊಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಎಸ್.ಮಾನು ಮೂವರು ಆರೋಪಿಗಳಿಗೆ ಮರಣದಂಡನೆ ಹಾಗೂ 1.20ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಅಲ್ಲದೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಬಾಲಕಿಯ ಹೆತ್ತವರಿಗೆ ಪರಿಹಾರ ಯೋಜನೆಯಡಿ 3.80ಲಕ್ಷ ಪರಿಹಾರ ನೀಡಬೇಕೆಂದು ಆದೇಶಿಸಿದ್ದಾರೆ.

ಸರಕಾರಿ ವಿಶೇಷ ಅಭಿಯೋಜಕ ಕೆ.ಬದರಿನಾಥ ನಾಯಿರಿ ವಾದ ಮಂಡಿಸಿದ್ದರು.

administrator

Related Articles

Leave a Reply

Your email address will not be published. Required fields are marked *

error: Content is protected !!