ಬೆಳ್ತಂಗಡಿ: ಮುಂದೊಂದು ದಿನ ಹಿಂದೂಗಳು ಸುನ್ನತ್ ಮಾಡಿಕೊಳ್ಳುವ ಸಂದರ್ಭ ಬರಬಹುದು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೆಳ್ತಂಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ ಮಾತನಾಡಿ, ನಮ್ಮ ಕಡೆಯ ಉಸಿರು ಇರುವವರೆಗೂ ಹಿಂದುತ್ವವೇ ಬದುಕು ಎಂಬ ರೀತಿಯ ರಾಜಕಾರಣ ಮಾಡದಿದ್ದರೆ, ಮುಂದೊಂದು ದಿನ ನಾವು ಸುನ್ನತ್ ಮಾಡಿಕೊಳ್ಳಬೇಕಾದ ಸಂದರ್ಭ ಬರಬಹುದು. ಆದ್ದರಿಂದ ನಾವು ಹಿಂದುತ್ವವನ್ನು ಮೈಗೂಡಿಸಿಕೊಂಡು ಕೆಲಸ ಮಾಡಬೇಕು ಎಂದು ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.